Breaking News

D ಗ್ಯಾಂಗ ಗೆ ಜೈ ಲಾ ಬೆಲಾ.. ?

Spread the love

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು.

ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. ಈ ವೇಳೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯ ಮುಂದೆ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದು ಅವರ ಮೇಲೆ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚಿನ ತನಿಖೆಗಾಗಿ ಪೊಲೀಸರು ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮತ್ತಷ್ಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಂದು ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಇನ್ನು ಕೆಲವು ದಿನಗಳ ಕಾಲ ಜೈಲೇ ಗತಿಯಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ