ಮೈಸೂರು: ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಮೈಸೂರಿನಲ್ಲಿ ಕಿಚ್ಚ ಸುದೀಪ್ ಬಡಮಕ್ಕಳನ್ನು ಭೇಟಿಯಾಗಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅರ್ಜುನವರ ಜ್ಯುವೆಲರ್ಸ್ ಕಡೆಯಿಂದ ಒಂದು ದಿನದ ಈ ಕಾರ್ಯಕ್ರಮದಲ್ಲಿ ನಟ ಸುದೀಪ್ ಅವರು ಇದೀಗ ಮೈಸೂರಿನಲ್ಲಿ ನಿರ್ಗತಿಕ ಮಕ್ಕಳ ಜತೆ ಕಾಲ ಕಳೆಯುತ್ತಿದ್ದಾರೆ.
ಸಾಧ್ಯವಾದಷ್ಟೂ ಮಕ್ಕಳಿಗೆ ಸ್ವತಃ ತಾವೇ ತಿಂಡಿಯನ್ನು ತಮ್ಮ ಕೈಯಾರೆ ಕೊಡುತ್ತಿರುವ ನಟ ಕಿಚ್ಚ ಸುದೀಪ್ ಅವರನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಮಕ್ಕಳು ಸ್ಟಾರ್ ನಟ ಸುದೀಪ್ ಅವರನ್ನು ಹತ್ತಿರದಿಂದ ನೋಡಿ, ಮುಟ್ಟಿ ಮಾತನಾಡಿಸಿ ಬಹಳಷ್ಟು ಖುಷಿ ಪಟ್ಟಿದ್ದಾರೆ. ಜತೆಗೆ, ಅವರೇ ತಮ್ಮ ಕೈಯಾರೆ ಕೊಟ್ಟ ತಿಂಡಿ ತಿಂದು ಹರ್ಷ ಗೊಂಡಿದ್ದಾರೆ.