Breaking News

ಗುಟ್ಕಾ ತಂದು ಕೊಡಲಿಲ್ಲ ಎಂದು ಏಳು ವರ್ಷದ ಬಾಲಕಿ ಕೊಲೆ

Spread the love

ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು ಕೊಡಲಿಲ್ಲ ಎಂದು ಬಾಲಕಿಯನ್ನ ಹತ್ಯೆ ಮಾಡಿದ್ದ. ಇದೀಗ ಆರೋಪಿ ಸಿದ್ದಲಿಂಗಯ್ಯ (51) ಎಂಬಾತನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಕೊಪ್ಪಳ, ಜೂ.16: ಎರಡು ತಿಂಗಳ ನಂತರ ಏಳು ವರ್ಷದ ಬಾಲಕಿ ಕೊಲೆ (Murder) ಪ್ರಕರಣವನ್ನು ಕೊಪ್ಪಳ ಪೊಲೀಸರು (Koppal Police) ಭೇದಿಸಿದ ಘಟನೆ ನಡೆದಿದೆ. ಹೌದು, ಗುಟ್ಕಾ ತಂದು ಕೊಡಲಿಲ್ಲ ಎಂದು ಬಾಲಕಿಯನ್ನ ಹತ್ಯೆ ಮಾಡಿದ್ದ. ಇದೀಗ ಆರೋಪಿ ಸಿದ್ದಲಿಂಗಯ್ಯ (51) ಎಂಬಾತನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಅನುಶ್ರಿ (07)ಕೊಲೆಯಾಗಿದ್ದ ಬಾಲಕಿಗುಟ್ಕಾ ತಂದು ಕೊಡಲಿಲ್ಲ ಎಂದು ಏಳು ವರ್ಷದ ಬಾಲಕಿ ಕೊಲೆ; ಪ್ರಕರಣ ಭೇದಿಸಿದ ಪೊಲೀಸರು

ಘಟನೆ ವಿವರ

ಕಳೆದ ಎಪ್ರಿಲ್ 18 ರಂದು ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು. ಎಪ್ರಿಲ್ 20 ರಂದು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಅಂದರೆ ಎಪ್ರಿಲ್ 21 ರಂದು ಬಾಲಕಿ ಶವ ಆಕೆಯ ಮನೆ ಸಮೀಪದ ಪಾಳು ಬಿದ್ದ ಮನೆಯಲ್ಲಿ ಪತ್ತೆಯಾಗಿತ್ತು. ಬಳಿಕ ಜಿಲ್ಲೆಯಾದ್ಯಂತ ಬಾಲಕಿ ಸಾವು  ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಸಾಕ್ಷಿ ಸಿಗದಂತೆ ಖತರ್ನಾಕ್​ ಪ್ಲಾನ್​; 2 ತಿಂಗಳ ಬಳಿಕ ಆರೋಪಿ ಅರೆಸ್ಟ್​

ಸಾಕ್ಷಿ ಸಿಗದಂತೆ ಬಾಲಕಿಯ ಶವವನ್ನ ಗೊಬ್ಬರ ಚೀಲದಲ್ಲಿ ಕಟ್ಟಿ ಎಸೆಯಲಾಗಿತ್ತು. ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಎರಡು ತಿಂಗಳ ನತರ ಬಾಲಕಿಯ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಗುಟ್ಕಾ ತರದ ಹಿನ್ನೆಲೆ ತನ್ನ ಮಾತನ್ನು ಕೇಳಲಿಲ್ಲ ಎಂದು ಕೋಪಗೊಂಡು ಕೋಲಿನಿಂದ ಬಾಲಕಿ ತಲೆಗೆ ದುಷ್ಕರ್ಮಿ ಹೊಡದಿದ್ದ. ತಲೆಗೆ ಜೋರಾದ ಪೆಟ್ಟು ಬಿದ್ದ ಹಿನ್ನೆಲೆ ಸ್ಥಳದಲ್ಲಿಯೇ ಮೃತಪಟ್ಟಿದ್ದಳು. ಬಾಲಕಿ ಸಾವನ್ನಪ್ಪಿರುವ ಭಯದಲ್ಲಿ ಚೀಲದಲ್ಲಿ ಶವ ತುಂಬಿ ಮನೆಯ ಹಿಂದೆ ಇಟ್ಟಿದ್ದ.  ಶವದ ವಾಸನೆ ಬರಲು ಶುರುವಾದ ಹಿನ್ನೆಲೆ ಚೀಲ ಇಟ್ಟಿದ್ದ ಸ್ಥಳ ಬದಲಾವಣೆ ಮಾಡಿದ್ದಾನೆ. ಇದೀಗ ಪೊಲಿಸರು ಆತನನ್ನು ಹೆಡೆಮುರಿ ಕಟ್ಟಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ