ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಎನ್ಡಿಎ ಕಾರ್ಯಕರ್ತರು ಎತ್ತಿನ ಗಾಡಿ, ಸೈಕಲ್ನಲ್ಲಿ ಪ್ರಯಾಣಿಸಿ ಸೋಮವಾರ ಪ್ರತಿಭಟಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ.
ಬದಲಾಗಿ ಗ್ಯಾರಂಟಿಗಳ ಗುಂಗಲ್ಲಿ ಕಾಲ ಹರಣ ಮಾಡುತ್ತಿದೆ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚು ಮಾಡಿ ಜನ ಸಾಮಾನ್ಯರಿಗೆ ಬರೆ ಎಳೆದಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸರ್ಕಾರದಲ್ಲಿ ಹಣವಿಲ್ಲ. ಗ್ಯಾರಂಟಿ ಯೋಜನೆಗಾಗಿ ಕಾಂಗ್ರೆಸ್ ಪ್ರತಿನಿತ್ಯ ಬೆಲೆ ಏರಿಕೆ ಮಾಡುತ್ತಿದೆ ಎಂದು ಕಾರ್ಯಕರ್ತರು ಆಪಾದಿಸಿದರು.