Breaking News
Home / Uncategorized / ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

Spread the love

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಪಟ್ಟಣದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮನವಿ

2010-11ರಲ್ಲಿಯೇ ಕರಾಡ-ಕೊಲ್ಹಾಪುರ-ಬೆಳಗಾವಿ ರೈಲ್ವೆ ಮಾರ್ಗ ಹಾಗೂ ಶೇಡಬಾಳ-ಅಥಣಿ-ವಿಜಯಪೂರ ನೂತನ ರೈಲ್ವೆ ಮಾರ್ಗಗಳನ್ನು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೇ ಕಳೆದ ಒಂದೂವರೆ ದಶಕದಿಂದ ಕುಂಟುತ್ತಾ ಸಾಗಿರುವ ಕುಡಚಿ-ಬಾಗಲಕೋಟೆ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ನೀಡಿರುವ ಮನವಿ ಸ್ವೀಕರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಂಸತ್ತಿನಲ್ಲಿ ಈ ಕುರಿತು ಧ್ವನಿ ಎತ್ತಿ ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ರೈಲ್ವೆ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದರು.


Spread the love

About Laxminews 24x7

Check Also

ಪಂಚಾಯತ್‌ಗಳ ಬಲವರ್ಧನೆಗೆ ರಾಜ್ಯ ಸರಕಾರ ಚಿತ್ತ ಹರಿಸಲಿ

Spread the love ರಾಜ್ಯದಲ್ಲಿ ಜುಲೈ ಒಂದರಿಂದ ಅನ್ವಯವಾಗುವಂತೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ