Breaking News

ಈ ಬಾರಿ ‘ಪಂಚಘಾತಕ’ಗಳು ಸಂಭವಿಸಲಿವೆ: ‘ಕೋಡಿಮಠ ಶ್ರೀ’ ಶಾಕಿಂಗ್ ಭವಿಷ್ಯ |

Spread the love

ಚಿಕ್ಕಬಳ್ಳಾಪುರ: ರಾಜ್ಯ, ದೇಶದಲ್ಲಿ ಈ ಬಾರಿ ಪಂಚಘಾತಕಗಳು ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಸ್ವಾಮೀಜಿಯವರು, ಕ್ರೋಧಿನಾಮ ಸಂವಸ್ತರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ ಅಂತ ತಿಳಿಸಿದ್ದಾರೆ.

 

ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಹೇಳಿದರು.

ಈ ಹಿಂದೆ ಕೋಠಿಮಠ ಶ್ರೀಗಳು ರಾಜ್ಯ, ದೇಶದ ರಾಜಕೀಯ, ಅವಘಡಗಳ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದರು. ಅವುಗಳಲ್ಲಿ ಅನೇಕವು ನಿಜ ಕೂಡ ಆಗಿದ್ದವು. ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ