Breaking News

ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Spread the love

ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ.

ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ.

ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ.

ಕೂಡಲೆ ಕಾರವಾರದಿಂದ ವೈಯರ್ ಲೆಸ್ ಮೂಲಕ ಕೂಡಲೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುವಂತೆ ಆದೇಶ ಬಂದಿತ್ತು. ಕರೆ ಸ್ವೀಕರಿಸಿದ ಪಿಎಸೈ ಉದ್ಧಪ್ಪ ಧರೆಪ್ಪನವರ್, ಎಎಸೈ ಲಲಿತಾ ರಜಪೂತ್ ಹಾಗೂ ಸಿಬಂದಿ ಪ್ರವೀಣ ಪೂಜಾರ ಮೇಲಾಧಿಕಾರಿಗಳಿಗೆ ವಿಷಯ ತಿಳಿಸಿ, ಜೀಪನ್ನೇರಿ ತಾಲೂಕು ಕೇಂದ್ರದಿಂದ 37 ಕಿಲೋ ಮೀಟರ್ ದೂರವಿರುವ ಹಿಲ್ಲೂರಿಗೆ ತೆರಳಿದ್ದರು.

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

ಕರೆ ಬಂದ 25 ನಿಮಿಷದಲ್ಲೇ ಪೊಲೀಸರು ಸ್ಥಳಕ್ಕೆ ತೆರಳಿ ಮಂಜುನಾಥ ಬೊಮ್ಮಯ್ಯ ನಾಯಕ ಅವರ ಮನೆಯ ಸುತ್ತಮುತ್ತ ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ.. ಆದರೆ 15 ನಿಮಿಷ ಕಳೆದರೂ ಶವ ಪತ್ತೆ ಆಗಲಿಲ್ಲ. ಆ ವೇಳೆ ಅಲ್ಲಿಯೇ ಮುಗುಳನಗುತ್ತಲೆ ಇದ್ದ, ಕರೆ ಮಾಡಿದ್ದ ಮಂಜುನಾಥ ನಾಯಕ ನಿಮಗೆ ನನ್ನ ಪತ್ನಿ ಹಾಗೂ ಮಗಳ ಶವ ಸಿಕ್ಕಿತೆ ಎಂದು ಪೊಲೀಸರನ್ನೇ ಪ್ರಶ್ನಿಸಿದ್ದಾನೆ. ಮಾತ್ರವಲ್ಲದೆ ಸಿಗಲ್ಲಾ ಬಿಡಿ ಅವರು ಮುಂದೆ ಕೊಲೆ ಆದರೂ ಆಗಬಹುದು. ನಾನೆ ಮುನ್ನೆಚ್ಚರಿಕೆಯಾಗಿ ಕರೆ ಮಾಡಿದ್ದೆ. ಅವರು ಮನೆಯಲ್ಲಿ ಕಾಣುತ್ತಿಲ್ಲ. ಹಾಗಾಗಿ ಸುಳ್ಳು ಕರೆ ಮಾಡಿದ್ದೆ ಎಂದು ಪೊಲೀಸರ ಮುಂದೆ ಹಲ್ಲು ಕಿರಿದು ನಗೆಯಾಡಿದ್ದಾನೆ. ಆತನ ಮಾತು ಕೇಳಿ ಪಿತ್ತ ನೆತ್ತಿಗೆ ಏರಿದ ಪೊಲೀಸರು ನಾಲ್ಕು ಬಿಗಿದು ಲಾಠಿ ರುಚಿ ತೋರಿಸಿದ್ದಾರೆ.


Spread the love

About Laxminews 24x7

Check Also

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Spread the loveಬೆಂಗಳೂರು: ಇನ್ನು ಮುಂದೆ  ಎಸ್‌ಎಸ್‌ಎಲ್‌ಸಿ ಪರೀಕ್ಷೆ  625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ