Breaking News

ಮಾರಾಟಕ್ಕೆ ಇಟ್ಟಿದ್ದ ಮಗು ಸಾವು

Spread the love

ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್‌ 20) ಮೃತಪಟ್ಟಿದೆ.

‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು.

ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್‌ ಪಾಟೀಲ ತಿಳಿಸಿದರು.

ಏನಿದು ಪ್ರಕರಣ: ‘ಪವಿತ್ರಾ ಮತ್ತು ಪ್ರವೀಣ ಎಂಬ ಪ್ರೇಮಿಗಳಿಗೆ ಮದುವೆಗೂ ಮುನ್ನವೇ ಮಗು ಜನಿಸಿತ್ತು. 30 ದಿನಗಳ ಬಳಿಕ ಮಗುವನ್ನು ಚಂದನ ಹಾಗೂ ಮಹಾದೇವಿ ಎನ್ನುವವರು ₹1.40 ಲಕ್ಷಕ್ಕೆ ಮಾರಾಟಕ್ಕೆ ಮುಂದಾಗಿದ್ದರು. ಈ ವಿಚಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗೆ ಗೊತ್ತಾಗಿತ್ತು. ರಹಸ್ಯ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಮಗು ಖರೀದಿಸುವುದಾಗಿ ಕಳೆದ ಭಾನುವಾರ ಮಹಾದೇವಿ ಅವರನ್ನು ಬೆಳಗಾವಿಗೆ ಕರೆಯಿಸಿದರು. ಅವರಿಂದ ಮಗು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ರಕ್ಷಣಾ ಘಟಕದ ದೂರು ಆಧರಿಸಿ ಈಗಾಗಲೇ ಐವರನ್ನು ಬಂಧಿಸಲಾಗಿದೆ. ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳದ ಮಹಾದೇವಿ ಜೈನರ, ಚನ್ನಮ್ಮನ ಕಿತ್ತೂರಿನ ಅಬ್ದುಲ್‌ಗಫಾರ್‌ ಲಾಡಖಾನ್‌, ಬೈಲಹೊಂಗಲ ತಾಲ್ಲೂಕಿನ ತುರಕರ ಶೀಗಿಹಳ್ಳಿಯ ಚಂದನ ಸುಬೇದಾರ, ಬೈಲಹೊಂಗಲ ತಾಲ್ಲೂಕಿನ ಸಂಪಗಾವಿಯ ಪವಿತ್ರಾ ಮಡಿವಾಳರ, ಧಾರವಾಡ ತಾಲ್ಲೂಕಿನ ಹೊಸಟ್ಟಿಯ ಪ್ರವೀಣ ಮಡಿವಾಳರ ಬಂಧಿತರು.


Spread the love

About Laxminews 24x7

Check Also

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

Spread the loveಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ