Breaking News

ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ; ಗೃಹ ಸಚಿವ ಪರಮೇಶ್ವರ

Spread the love

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಸಲಿಂಗಕಾಮದ ಆರೋಪದ ಮೇಲೆ ಅರೆಸ್ಟ್ ಆಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇವರು. ರೇವಣ್ಣ ಕುಟುಂಬದ ಮತ್ತೊಂದು ಪ್ರಕರಣ ಸಧ್ಯ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಸಲಿಂಗಕಾಮದ ಆರೋಪದ ಮೇಲೆ ಶನಿವಾರ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ವಿಚಾರಣೆಗೆ ಬಂದಾಗ ವಶಕ್ಕೆ ಪಡೆದುಕೊಂಡಿದ್ದಾರೆ.

ಸೂರಜ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದ್ದು, ಹಾಸನ ಜಿಲ್ಲಾ ಎಸ್‌ಪಿ ಅವರಿಗೆ ಎಡಿಜಿಪಿ ಆರ್‌. ಹಿತೇಂದ್ರ ಆದೇಶಿಸಿದ್ದಾರೆ. ಆದೇಶದಲ್ಲಿ ಖುದ್ದು ಸಿಐಡಿಗೆ ತೆರಳಿ ಕೇಸ್‌ ಫೈಲ್‌ ಮಾಡಲು ಸೂಚಿಸಿದ್ದಾರೆ. ಅಲ್ಲದೆ ತನಿಖೆಗೆ ಎಲ್ಲ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿಲಾಗಿದೆ.


Spread the love

About Laxminews 24x7

Check Also

ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…

Spread the love ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ