Breaking News

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

Spread the love

ವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ.

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು ಎಂದು ಮುಖಂಡರು ಸಚಿವರನ್ನು ಒತ್ತಾಯಿಸಿದರು.

ಕಾರ್ಪೊರೇಟ್ ತೆರಿಗೆ, ಸಂಪತ್ತಿನ ಮೇಲೆ ತೆರಿಗೆ ಹಾಗೂ ಪಿತ್ರಾರ್ಜಿತ ಆಸ್ತಿ ತೆರಿಗೆಯ ಮೂಲಕ ಹಣಕಾಸಿನ ಸಂಪನ್ಮೂಲ ಒಗ್ಗೂಡಿಸಲು ಮುಂದಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ