Breaking News

ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ

Spread the love

ಶಿವಮೊಗ್ಗ: ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರಿ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿ ಗಳು ಸಹ ರಾಜೀನಾಮೆ ಕೊಡಬೇಕಾಗುತ್ತದೆ.

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

ಸಿಎಂ ಅವರೇ ಹಣಕಾಸಿನ ಸಚಿವರಾಗಿದ್ದಾರೆ. ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಹಗರಣವಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗ ಆಗಿದೆ ಎನ್ನುವ ಚರ್ಚೆ ಮಾಡಿದ್ದಾರೆ ಎಂದರು.


Spread the love

About Laxminews 24x7

Check Also

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Spread the love ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಆದರೆ ಇಡೀ ದೇಶದ ಜನರ ಚಿತ್ತ ಇಂದಿನ ದೆಹಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ