Breaking News

ಹು-ಧಾ ಕಮಿಷನರ್​ ಸೇರಿದಂತೆ 25 ಐಪಿಎಸ್​ ಅಧಿಕಾರಿಗಳ ವರ್ಗ

Spread the love

ಬೆಂಗಳೂರು, ಜುಲೈ 03: ಹುಬ್ಬಳ್ಳಿಯಲ್ಲಿ (Hubballi) ಕಳೆದ ಮೂರು ತಿಂಗಳಲ್ಲಿ 3 ಕೊಲೆಗಳಾದವು. ಇಬ್ಬರು ಯುವತಿಯರು ಮತ್ತು ಓರ್ವ ಯುವಕನ ಕೊಲೆಯಾಯಿತು.

ಇದರಿಂದ ಭಯಗೊಂಡ ಹುಬ್ಬಳ್ಳಿ ಜನತೆ ಮಹಾನಗರದ ಕಾನೂನು ಸುವ್ಯವಸ್ಥೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹುಬ್ಬಳ್ಳಿ-ಧಾರವಾಡ (Hubballi-Dharwad) ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್ (Renuka Sukumar)​ ಅವರನ್ನು ವರ್ಗಾವಣೆಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು.

ಸರಣಿ ಕೊಲೆ, ಸಾರ್ವಜನಿಕರ ಒತ್ತಡ: ಹು-ಧಾ ಕಮಿಷನರ್​ ಸೇರಿದಂತೆ 25 ಐಪಿಎಸ್​ ಅಧಿಕಾರಿಗಳ ವರ್ಗ

ಇದೀಗ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ್​ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಐಪಿಎಸ್​ ಅಧಿಕಾರಿ ರೇಣುಕಾ ಸುಕುಮಾರ್​ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಎಐಜಿಪಿಯಾಗಿ ಬೆಂಗಳೂರು ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಎನ್. ಶಶಿಕುಮಾರ್​ ಅವರನ್ನು ನೇಮಿಸಲಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ