Breaking News

ಅಧಿಕ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ಸುರೇಶ ಕುಮಾರ್ ವಾರ್ನಿಂಗ್………..

Spread the love

ಬೆಂಗಳೂರು, ಜೂ.11- ಯಾವುದೇ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಬಾರದು ಎಂದು ಶಿಕ್ಷಣ ಇಲಾಖೆ ಒಂದೂವರೆ ತಿಂಗಳ ಹಿಂದೆಯೇ ಆದೇಶ ಹೊರಡಿಸಿದೆ.

ಈವರೆಗೂ ಯಾವ ಶಾಲೆಯ ವಿರುದ್ಧವೂ ಪೋಷಕರು ದೂರು ನೀಡಿಲ್ಲ. ಒಂದು ವೇಳೆ ದೂರು ಕೇಳಿ ಬಂದಿದ್ದೇಯಾದರೆ ಸರ್ಕಾರ ಮುಲಾಜಿಲ್ಲದೆ ಕ್ರಮ ಜರುಗಿಸಲಿದೆ ಎಂದು ಹೇಳಿದರು.

ಸಮವಸ್ತ್ರದ ಜೊತೆಯಲ್ಲಿ ಮಾಸ್ಕ್‍ಗಳನ್ನು ಖರೀದಿ ಮಾಡಬೇಕೆಂದು ಕೆಲವು ಶಾಲೆಗಳು ಒತ್ತಡ ಹೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸುತ್ತಿರುವ ಅವರು, ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಈ ರೀತಿ ಒತ್ತಡ ಹೇರಿದ ದೂರು ಬಂದಿತ್ತು.

ಅದಕ್ಕೆ ಶೋಕಾಸ್ ನೋಟಿಸ್ ಕೂಡ ನೀಡಲಾಗಿದೆ. ಯಾವುದೇ ಶಾಲೆಗಳು ಬಲವಂತವಾಗಿ ಮಾಸ್ಕ್ ಮಾರಾಟ ಮಾಡಲು ಪ್ರಯತ್ನಿಸಿದರೆ ಪೋಲೀಸರಿಗೆ ದೂರು ನೀಡಲಾಗುವುದು. ಈ ಕುರಿತಂತೆ ಶೀಘ್ರವೇ ಸರ್ಕಾರ ಪರಿಷ್ಕøತ ಆದೇಶವೊಂದನ್ನು ಹೊರಡಿಸಲಿದೆ ಎಂದು ತಿಳಿಸಿದರು.

https://youtu.be/r6bH1CgI-Qg


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ