Breaking News

ಚೋರ್ಲಾ ಘಾಟ್‌ಗೆ ಕೇಂದ್ರ ‘ಪ್ರವಾಹ’ ತಂಡದ ಸದಸ್ಯರ ಭೇಟಿ

Spread the love

ಬೆಳಗಾವಿ: ಕರ್ನಾಟಕ- ಗೋವಾ ಗಡಿಯ ಚೋರ್ಲಾ ಘಾಟ್‌ಗೆ ಭಾನುವಾರ ಭೇಟಿ‌ ನೀಡಿದ ಕೇಂದ್ರದ ‘ಪ್ರವಾಹ’ ತಂಡದ ಸದಸ್ಯರು, ಮಳೆ‌ ನಡುವೆಯೇ ಮಹದಾಯಿ ಜಲಾನಯನ ಪ್ರದೇಶ ವೀಕ್ಷಿಸಿದರು.

ಚೋರ್ಲಾ ಘಾಟ್ ಮತ್ತು ಹರತಾಳ ನಾಲೆ ವೀಕ್ಷಿಸಿದ ಅಧಿಕಾರಿಗಳಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಮಹದಾಯಿ: ಚೋರ್ಲಾ ಘಾಟ್‌ಗೆ ಕೇಂದ್ರ 'ಪ್ರವಾಹ' ತಂಡದ ಸದಸ್ಯರ ಭೇಟಿ

‘ಅನುಮತಿ ‌ಇಲ್ಲದೆ ಕರ್ನಾಟಕ ‌ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ’ ಎನ್ನುವ ಗೋವಾ ಸರ್ಕಾರದ ‌ಆರೋಪದ ಹಿನ್ನೆಲೆಯಲ್ಲಿ ಈ‌ ಸದಸ್ಯರು ಪರಿಶೀಲನೆ ನಡೆಸಿದರು‌.

ಆದರೆ, ಇಲ್ಲಿ ಯಾವುದೇ ಕಾಮಗಾರಿ ‌ನಡೆದಿಲ್ಲ ಎಂದು ಕೇಂದ್ರ ‌ತಂಡಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟರು.

ನಂತರ ಕಣಕುಂಬಿ ಅತಿಥಿ ಗೃಹದಲ್ಲಿ ಸಭೆ ನಡೆಸಿದ ಕೇಂದ್ರದ ‘ಪ್ರವಾಹ’ ತಂಡಕ್ಕೆ ರಾಜ್ಯದ ಅಧಿಕಾರಿಗಳು ಕಳಸಾ-ಬಂಡೂರಿ ಯೋಜನೆ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ