Breaking News

ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿ‌ಕುಣಿತದ ಸದ್ದು

Spread the love

ಬೈಲಹೊಂಗಲ: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ.

ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ.

ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿ‌ಕುಣಿತದ ಸದ್ದು

ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ.

ವಕ್ಕುಂದದ ಸುತ್ತಲಿನ ಜನರೂ ಮೊಹರಂ ತಯಾರಿಯ ಸೊಬಗು ಕಾರಣ ಗ್ರಾಮಕ್ಕೆ ಬರುತ್ತಿದ್ದಾರೆ. ಜುಲೈ 17ರಂದು ಹಬ್ಬದ ಆಚರಣೆಯಲ್ಲಿ ಹುಲಿ‌ಕುಣಿತ, ಹಲಗೆ ವಾದನ, ಮೊಹರಂ ಪದಗಳ ಜನರನ್ನು ಆಕರ್ಷಿಸಲಿವೆ.ನಾಗಪ್ಪ ಹೊಸೂರ, ಚಿನಕೋಲ ತಂಡದ ಸದಸ್ಯಮೊದಲಿನಿಂದ ಗ್ರಾಮದ ಎಲ್ಲ ಸಮಾಜದವರು ಸೇರಿ ಮೊಹರಂ ಆಚರಿಸುತ್ತೇವೆ. ಎಲ್ಲರೂ ಒಗ್ಗೂಡಿ ಹಬ್ಬ ಆಚರಿಸುವುದರ ಸಂಭ್ರಮವೇ ಬೇರೆ.

ಚಿನಕೋಲು ಮಜಲಿನ ಹಿರಿಯರಾದ ಭೀಮಪ್ಪ ಹಲ್ಕಿ, ಈರಪ್ಪ ತಲ್ಲೂರ, ಹುಸೇನ್ ನನ್ನೆಖಾನ, ಸಿದ್ದಪ್ಪ ಪೂಜೇರಿ, ವಾದ್ಯಮೇಳದ ಶಂಕರ ಚಿಮ್ಮಕ್ಕಿ, ಯಮನಪ್ಪ ಚಿಮ್ಮಕ್ಕಿ, ಗಾಯಕರಾದ ಮಡಿವಾಳಪ್ಪ ತಳವಾರ, ರುದ್ರಪ್ಪ ಹೊಸೂರ, ರಾಮಪ್ಪ ಸುರಪುರ ಅವರು ಯುವಕರಿಗೆ ಮಾರ್ಗದರ್ಶನ ನೀಡಿ, ತಯಾರಿ ಮಾಡುತ್ತಿದ್ದಾರೆ.


Spread the love

About Laxminews 24x7

Check Also

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

Spread the loveಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ