Breaking News

ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ

Spread the love

ಹುಬ್ಬಳ್ಳಿ : ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಪುನರ್ವಸು ಮಳೆ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಘಟಪ್ರಭಾ ಹಾಗೂ ಮಲಪ್ರಭಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತMonsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

ಕೆಲವೆಡೆ ಹಾನಿ ಸಂಭವಿಸಿದೆ.

ಜಲದಿಗ್ಬಂಧನ
ಉತ್ತರ ಕನ್ನಡದ ಕರಾವಳಿಯಲ್ಲೂ ಭಾರೀ ಮಳೆ ಸುರಿಯುತ್ತಿದೆ. ಅಘನಾಶಿನಿ, ವಾಲಗಳ್ಳಿ-ಅರೋಡಿ ರಸ್ತೆಗಳು ಜಲಾವೃತವಾಗಿವೆ. ಅಂಕೋಲಾದ ಹಾರವಾಡದಲ್ಲಿ ಕಡಲ್ಕೊರೆತವಾಗಿದೆ. ಕಾರವಾರದ ಚೆಂಡಿಯಾ, ಇಡೂರು ಬಳಿ ಮನೆಗಳಿಗೆ ಮಳೆ ನೀರು ನುಗ್ಗಿದ ಕಾರಣ ಜಲದಿಗ್ಬಂಧನ ಉಂಟಾಗಿತ್ತು. ಸುಪಾ ಹಿನ್ನೀರು, ಕೊಡಸಳ್ಳಿ, ಕದ್ರಾದಲ್ಲಿ ಭಾರೀ ಮಳೆ ಸುರಿದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ