Breaking News

ಗ್ಯಾರಂಟಿ’ ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ

Spread the love

ಕಾಗವಾಡ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು’ ಎಂದು ಕಾಗವಾಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜು ಕಾಗೆ ಹೇಳಿದರು.

'ಗ್ಯಾರಂಟಿ' ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ

ಕಾಗವಾಡ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು.

‘ಐದು ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆವರೆಗೆ ಮಾತ್ರ ಸೀಮಿತವಾಗಿರುತ್ತವೆ. ನಂತರ ಅವುಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿರೋಧ ಪಕ್ಷದವರು ಆರೋಪಿಸುತ್ತಿರುವುದು ಶುದ್ಧ ಸುಳ್ಳು. ರಾಜ್ಯದಲ್ಲಿ ಮುಂದಿನ 5 ವರ್ಷ ನಮ್ಮ ಕಾಂಗ್ರೆಸ್ ಸರ್ಕಾರವೇ ಇರಲಿದೆ. ಇದಲ್ಲದೇ ಮುಂದಿನ 20 ವರ್ಷಗಳವರೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಇರಲಿದ್ದು, ಗ್ಯಾರಂಟಿ ಯೋಜನೆಗಳು ಸಹ ಮುಂದಿನ 20 ವರ್ಷಗಳವರೆಗೂ ಇರಲಿವೆ. ನಮ್ಮ ಕ್ಷೇತ್ರದಲ್ಲಿ ಗೃಹಲಕ್ಷ್ಮಿ ಯೋಜನೆಯು ಶೇ. 98.88ರಷ್ಟು ಅನುಷ್ಠಾನಗೊಂಡಿದೆ’ ಎಂದರು.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ