Breaking News

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

Spread the love

ಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು‌.

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ.

ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ಥ್ ನಿಯೋಜಿಸಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ