Breaking News

ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!

Spread the love

ಬೆಂಗಳೂರು ;ಪೊಲೀಸ್ ಕಾನ್​ಸ್ಟೆಬಲ್​ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವವರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷ ಅವಧಿಗೆ ಹೆಚ್ಚಳ ಮಾಡುವ ಸಿದ್ಧತೆ ನಡೆಸಿರುವ ಮಾಹಿತಿ ಹಿನ್ನೆಲೆಯಲ್ಲಿ ನಾಲ್ಕು ವರ್ಷದಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪೊಲೀಸ್ ಕಾನ್​ಸ್ಟೆಬಲ್​ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗಿಳಿಯುವ ಎಚ್ಚರಿಕೆ ಕೊಟ್ಟಿದ್ದಾರೆ.

ವರ್ಗಾವಣೆ ನಿಯಮ ಬದಲು ಸರ್ಕಾರದ ವಿರುದ್ಧ ಖಾಕಿ ಕೆಂಡ!

ಮೊದಲಿಗೆ ಎರಡೂವರೆ ವರ್ಷ ಪ್ರೊಬೆಷನರಿ ಅವಧಿ ಪೂರ್ಣಗೊಳಿಸಿದರೆ ಕಾನ್​ಸ್ಟೆಬಲ್​ಗಳನ್ನು ವರ್ಗಾವಣೆ ಮಾಡಲಾಗುತ್ತಿತ್ತು. ನಂತರ 3 ವರ್ಷ ಅವಧಿಗೆ ಏರಿಸಲಾಯಿತು. 2019ರಲ್ಲಿ 5 ವರ್ಷ ಸೇವಾವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನಷ್ಟೇ ಅಂತರ ಜಿಲ್ಲಾ ವರ್ಗಾವಣೆಗೆ ಪರಿಗಣಿಸುವುದಾಗಿ ಆದೇಶ ಹೊರಡಿಸಲಾಯಿತು. ಅದಾದ ಕೆಲವೇ ದಿನಗಳಿಗೆ ಪುನಃ 7 ವರ್ಷದ ಅವಧಿಗೆ ಏರಿಕೆ ಮಾಡಿ ಸರ್ಕಾರ ಆದೇಶಿಸಿತು.

ಪದೇಪದೆ ಅವಧಿ ಹೆಚ್ಚಳದಿಂದ ವರ್ಗಾವಣೆ ಭಾಗ್ಯ ಸಿಗದೆ ಪೊಲೀಸ್ ಕಾನ್​ಸ್ಟೆಬಲ್​ಗಳು ರೋಸಿದ್ದಾರೆ. ಪ್ರವೀಣ್ ಸೂದ್ ಡಿಜಿಪಿಯಾಗಿದ್ದಾಗ ಪೊಲೀಸರ ವರ್ಗಾವಣೆ ಅನುಕೂಲಕ್ಕಾಗಿಯೇ ಕೆಎಸ್​ಪಿ ಪೋರ್ಟಲ್ ಅಭಿವೃದ್ಧಿಪಡಿಸಿ, ಅನುಷ್ಠಾನಕ್ಕೆ ತರಲಾಗಿತ್ತು.

ಪೋರ್ಟಲ್​ನಲ್ಲಿ ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ಎಂಬ ನಿಯಮವನ್ನು ಪೊಲೀಸ್ ಇಲಾಖೆಯೇ ಜಾರಿಗೆ ತರಲಾಗಿತ್ತು. ಆದರೆ, ಪೊರ್ಟಲ್ ನಿಯಮದ ಪ್ರಕಾರವೇ ವರ್ಗಾವಣೆಗೆ ಅರ್ಜಿ ಸಲ್ಲಿಸಿ ಒಂದೂವರೆ ವರ್ಷದಿಂದ ಕಾನ್​ಸ್ಟೆಬಲ್​ಗಳು ಕಾಯುತ್ತಿದ್ದಾರೆ.

ಆದರೀಗ ವರ್ಗಾವಣೆ ಅವಧಿಯನ್ನು 10 ವರ್ಷಕ್ಕೆ ಹೆಚ್ಚಳ ಮಾಡಬೇಕು ಎಂದು ಡಿಜಿಪಿ ಕಚೇರಿಯಿಂದ ಗೃಹಸಚಿವರ ಕಚೇರಿಗೆ ಕಡತ ರವಾನೆಯಾಗಿದೆ. ಸರ್ಕಾರವೂ ನಿಯಮಕ್ಕೆ ತಿದ್ದುಪಡಿ ತಂದು ಏರಿಕೆ ಮಾಡಲು ನಿರ್ಧರಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗೃಹಸಚಿವರು ಕಾನ್​ಸ್ಟೆಬಲ್​ಗಳ ವರ್ಗಾವಣೆ ಹಾಗೂ ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ, ಸದ್ಯ ಯಾವುದೇ ರೀತಿ ತಿದ್ದುಪಡಿ ಮಾಡದೆ ಈಗಾಗಲೇ ರೂಪಿಸಿರುವ ಕೆಎಸ್​ಪಿ ಪೋರ್ಟಲ್ ಪ್ರಕಾರವೇ ವರ್ಗಾವಣೆ ಪ್ರಕ್ರಿಯೆ ಮುಗಿಸಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿ ಎಂದು ಕಾನ್​ಸ್ಟೆಬಲ್​ಗಳು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ