ರೇಷನ್‌ ಕಾರ್ಡ್‌ʼ ಹೊಂದಿರುವ ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ.ಹಣ!

Spread the love

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ʻರೇಷನ್‌ ಕಾರ್ಡ್‌ʼ ಹೊಂದಿರುವ ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ.ಹಣ!

ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ