Breaking News

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

Spread the love

ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

ಮಲ್ಲರೆಡ್ಡಿ ಸಸ್ಪೆಂಡ್ ಆಗಿರುವ ಗ್ರಾಮ ಪಂಚಾಯತ್ ಪಿಡಿಒ. ಗ್ರಾಮದ ಮೂರು ಬೋರ್ ವೆಲ್ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದಾಗ್ಯೂ ಪಿಡಿಒ ಮಲ್ಲರೆಡ್ಡಿ ಅದೇ ನೀರನ್ನು ಕುಡಿಯಲು ಪೂರೈಕೆ ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಸಿಇಓ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ