Breaking News

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

Spread the love

ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

 

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ ಸಾವಿರಾರು ಕೋಟಿ ರೂ.ಹಗರಣ ನಡೆದಿದೆ ಎಂದು ರಾಜ್ಯ ಬಿಜೆಪಿ ಮತ್ತೊಂದು ಗಂಭೀರ ಆರೋಪ ಮಾಡಿದೆ.BIG NEWS : ವಾಲ್ಮೀಕಿ, ಮುಡಾ ಆಯ್ತು ಈಗ ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿ ರೂ.ಗೂ ಹೆಚ್ಚು ಹಗರಣ!

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ಹಗರಣಗಳ ಸರಣಿ ಧಾರಾವಾಹಿಯೇ ಕಾಂಗ್ರೆಸ್ ಸರ್ಕಾರ.

ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, ಈಗ ಅಪೆಕ್ಸ್‌ ಬ್ಯಾಂಕ್‌ ನ ಸರದಿ.ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ನಲ್ಲಿ ₹2000 ಕೋಟಿಗೂ ಹೆಚ್ಚು ಹಗರಣ ನಡೆಸಿದ್ದು, ಹೈಕೋರ್ಟ್‌ ಈ ಸಂಬಂಧ ತನಿಖೆಗೆ ಆದೇಶಿಸಿದೆ ಎಂದು ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ಅವರಾದಿಯಾಗಿ ಕಾಂಗ್ರೆಸ್‌ ನ ಬಹುಪಾಲು ಸಚಿವರು ಹಾಗೂ ಶಾಸಕರು ಪರಪ್ಪನ ಅಗ್ರಹಾರಕ್ಕೆ ತಾ ಮುಂದು ನಾ ಮುಂದು ಎಂಬ ರೇಸ್‌ ನಲ್ಲಿರುವುದು ಕರ್ನಾಟಕದ ದುರಂತ ಎಂದು ಕಿಡಿಕಾರಿದೆ.


Spread the love

About Laxminews 24x7

Check Also

ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ರೇಡ್ : ಹಲವು ದಾಖಲೆಗಳ ಪರಿಶೀಲನೆ

Spread the love ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ