Breaking News

KSRTC ಬಸ್​ ಚಾಲಕನ ರೀಲ್ಸ್​ ಶೋಕಿಗೆ ಎತ್ತುಗಳು ಬಲಿ, ರೈತನ ಸ್ಥಿತಿ ಗಂಭೀರ

Spread the love

ಹುಬ್ಬಳ್ಳಿ: ಇತ್ತೀಚಿನ ವರ್ಷಗಳಲ್ಲಿ ಜನರ ರೀಲ್ಸ್​ ಹುಚ್ಚಾಟಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಭರದಲ್ಲಿ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಜನರು ಇನ್ನಿಲ್ಲದ ಪೇಚಿಗೆ ಸಿಲುಕುತ್ತಾರೆ. ಇದೀಗ ಹುಬ್ಬಳ್ಳಿಯಲ್ಲಿ KSRTC ಚಾಲಕನೋರ್ವ ಬಸ್​ ಚಾಲನೆ ವೇಳೆ ರೀಲ್ಸ್​ ಮಾಡಲು ಹೋಗಿ ಎರಡು ಎತ್ತು ಹಾಗೂ ರೈತನ ಜೀವಕ್ಕೆ ಕುತ್ತು ತಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ.

 

 

 

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್​ನಲ್ಲಿ ಚಾಲಕ ರೀಲ್ಸ್​ ಮಾಡಲು ಶುರು ಮಾಡಿದ್ದಾನೆ. ಬಸ್​ ಚಾಲನೆ ವೇಳೆ ಸಂಪೂರ್ಣವಾಗಿ ರೀಲ್ಸ್​ನಲ್ಲಿ ಮುಳುಗಿದ್ದ ಚಾಲಕನು ಮುಂದೆ ಹೋಗುತ್ತಿದ್ದ ಎತ್ತಿನಗಾಡಿಯನ್ನು ಗಮನಿಸದೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ರೈತನಿಗೆ ಗಂಭೀರ ಗಾಯವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.


Spread the love

About Laxminews 24x7

Check Also

ಅಲ್ಪಸಂಖ್ಯಾತರ ಕಲ್ಯಾಣ ಮಾಡವುದು ತಪ್ಪೇ..?: ಎಚ್.ಕೆ. ಪಾಟೀಲ ಪ್ರಶ್ನೆ

Spread the love ಹುಬ್ಬಳ್ಳಿ: ಬಿಜೆಪಿ ಅನಾವಶ್ಯಕ ರಾಜಕಾರಣ ಮಾಡುತ್ತಿರುವುದು ಸೂಕ್ತವಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ