Breaking News

ಅನಂತನಾರಾಯಣ ವಾದ್ಯಾರ್ ಅವರಿಗೆ ವ್ಯಾಸಜ್ಯೋತಿ ಪ್ರಶಸ್ತಿ

Spread the love

ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ಜ್ಯೋತಿ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಸಹಯೋಗದಲ್ಲಿ ನೀಡುವ 2024ನೇ ಸಾಲಿನ ‘ವ್ಯಾಸಜ್ಯೋತಿ ಪ್ರಶಸ್ತಿ’ಗೆ ವೇದಬ್ರಹ್ಮ ಶ್ರೀ ಅನಂತನಾರಾಯಣ ವಾದ್ಯಾರ್ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿಯು ನಗದು ಮತ್ತು ಫಲಕವನ್ನು ಒಳಗೊಂಡಿದೆ.

ಜು. 21ರಂದು ್ಗ ಭಾರತೀಯ ವಿದ್ಯಾ ಭವನದ ಕೆ.ಆರ್.ಜಿ. ಸಭಾಂಗಣದಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ವಿಶ್ವಸ್ಥರಾದ ಎಂ. ನರಸಿಂಹನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿದ್ಯಾಭವನದ ನಿರ್ದೇಶಕ ಎಚ್.ಎನ್. ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಡಾ. ಪಿ.ಎಸ್. ಗೀತಾ ಅವರು ‘ಗುರುವಿನ ಮಹತ್ವ’ ವಿಷಯ ಕುರಿತು ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ