Breaking News

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ವಿರುದ್ಧವೂ ದೂರು

Spread the love

ಬೆಳಗಾವಿ: ಪತಿ ಹಾಗೂ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ ವಿರುದ್ಧವೇ ಪ್ರತಿ ದೂರು ದಾಖಲಾಗಿದೆ.

ಇಲ್ಲಿನ ಗಣೇಶಪುರದ ನಿವಾಸಿ ಕನ್ವಿಕಾ ಗಣೇಶ ಗುಡ್ಯಾಗೋಳ (22) ಮಂಗಳವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ವಿರುದ್ಧವೂ ದೂರು

ನಂತರ ಪತಿ ಹಾಗೂ ಅವರ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಪತಿ ಗಣೇಶ ಅವರ ತಂದೆ ಹಾಗೂ ಸೋದರಮಾವ ಇಲ್ಲಿನ ಕ್ಯಾಂಪ್‌ ಠಾಣೆಗೆ ಪ್ರತಿ ದೂರು ನೀಡಿದ್ದಾರೆ.

‘ಕನ್ವಿಕಾ ಮನೆಯಲ್ಲಿ ಸರಿಯಾಗಿ ನಡೆದುಕೊಂಡಿಲ್ಲ. ಅವರಿಗೆ ಮಾದಕ ದ್ರವ್ಯಗಳ ಚಟವಿದೆ. ಗಣೇಶ ಹಾಗೂ ಕನ್ವಿಕಾ ಸಹಪಾಠಿಗಳಾಗಿದ್ದರು. ಕನ್ವಿಕಾ ಬಗ್ಗೆ ಗೊತ್ತಾದ ಮೇಲೆ ಗಣೇಶ ಮದುವೆಗೆ ನಿರಾಕರಿಸಿದ್ದ. ಆದರೆ, ಬಿಜೆಪಿ ಮುಖಂಡ ಪೃಥ್ವಿಸಿಂಗ್‌ ಎಂಬುವವರು ಬೆದರಿಕೆ ಹಾಕಿ ಮದುವೆ ಮಾಡಿಸಿದ್ದರು. ಮದುವೆ ಬಳಿಕವೂ ಕನ್ವಿಕಾ ತಮ್ಮ ಚಟ ಬಿಡಲಿಲ್ಲ. ಬೇರೊಬ್ಬ ವ್ಯಕ್ತಿ ಜತೆಗೆ ಸ್ನೇಹ ಬೆಳೆಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳದ ದೂರು ನೀಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ