ಚಿಕ್ಕೋಡಿ: ಕನ್ನಡ ನಾಮಫಲಕ ಅಳವಡಿಸಲು ಒತ್ತಾಯ

Spread the love

ಚಿಕ್ಕೋಡಿ: ತಾಲ್ಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ಭಾಷೆಯ ಫಲಕಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನಾದ್ಯಂತ ಅಂಗಡಿ ಮುಂಗಟ್ಟುಗಳ ಮೇಲೆ ಅನ್ಯ ಭಾಷೆಯ ನಾಮ ಫಲಕಗಳೇ ರಾರಾಜಿಸುತ್ತಿದ್ದು, ಶೇ 60ರಷ್ಟು ಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದರೂ ಅಂಗಡಿಗಳ ಮಾಲೀಕರು ತಮ್ಮ ತಮ್ಮ ಅಂಗಡಿ ಮುಂಗಟ್ಟುಗಳ ಮುಂದಿರುವ ಫಲಕಗಳಲ್ಲಿ ಕನ್ನಡ ಭಾಷೆ ಬರೆಯಿಸದೇ ಸರ್ಕಾರದ ಆದೇಶವನ್ನು ಕಡೆಗಣಿಸುತ್ತಿವೆ ಎಂದು ಕರವೇ ತಾಲ್ಲೂಕು ಅಧ್ಯಕ್ಷ ನಾಗೇಶ ಮಾಳಿ ಒತ್ತಾಯಿಸಿ ಮನವಿ ಸಲ್ಲಿಸಿದರು.

ಚಿಕ್ಕೋಡಿ: ಕನ್ನಡ ನಾಮಫಲಕ ಅಳವಡಿಸಲು ಒತ್ತಾಯ

ಉಪ ವಿಭಾಗಾಧಿಕಾರಿಗಳ ಕಚೇರಿಯ ಗ್ರೇಡ್ 2 ತಹಶೀಲ್ದಾರ್‌ ಪರಿಮಳಾ ದೇಶಪಾಂಡೆ ಕರವೇ ಸಂಘಟಕರಿಂದ ಮನವಿ ಸ್ವೀಕರಿಸಿದರು. ಹಿರಿಯ ಸಾಹಿತಿ ಎಸ್ ವೈ ಹಂಜಿ, ಸಂಜು ಬಡಿಗೇರ, ನಾಗೇಶ ಕಾಡಾಪೂರೆ, ಸುನೀಲ ತೇರದಾಳೆ, ರಾಮಚಂದ್ರ ಹಂಡೆ, ವಿಶಾಲ ಕುಡಚೆ ಇದ್ದರು.


Spread the love

About Laxminews 24x7

Check Also

ನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್!

Spread the loveನನ್ನ ದಾಖಲೆ ಸೇಫ್​. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದ ಮುತ್ತಯ್ಯ ಮುರಳೀಧರನ್! ನವದೆಹಲಿ: ಶ್ರೀಲಂಕಾದ ಲೆಜೆಂಡರಿ ಕ್ರಿಕೆಟಿಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ