Breaking News

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಹೆಡ್‌ ಕಾನ್ಸ್‌ಟೇಬಲ್‌

Spread the love

ಗುಬ್ಬಿ: ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.

ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ