Breaking News

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌

Spread the love

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌

ಹೊಸದಿಲ್ಲಿ: ಈ ಬಾರಿಯ ಕೇಂದ್ರ ಬಜೆಟ್‌ “ಕಾಪಿಕ್ಯಾಟ್‌’ ಬಜೆಟ್‌ ಆಗಿದ್ದು, ಇದು ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್‌ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.Mallikarjun Kharge; ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌

ಮೋದಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಬಜೆಟ್‌ ಮಂಡನೆಯಾಗಿದೆ ಎಂದಿದ್ದಾರೆ.

ಈ ಬಗ್ಗೆ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆ ದು ಕೊಂಡಿ ರುವ ಖರ್ಗೆ, “ಮೋದಿ ಸರ್ಕಾರದ “ಕಾಪಿಕ್ಯಾಟ್‌ ಬಜೆಟ್‌’ಗೆ ಸರಿಯಾಗಿ ಕಾಂಗ್ರೆಸ್‌ನ ನ್ಯಾಯಪತ್ರವನ್ನು ನಕಲು ಮಾಡಲೂ ಬಂದಿಲ್ಲ. ತಮ್ಮ ಮಿತ್ರ ಪಕ್ಷಗಳಿಗಾಗಿ ಅರೆ ಮನಸ್ಸಿನಲ್ಲಿ ಉಚಿತ ಕೊಡುಗೆಗಳನ್ನು ನೀಡಿ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಇದು ದೇಶದ ಪ್ರಗತಿಗಾಗಿ ಮಂಡನೆಯಾದ ಬಜೆಟ್‌ ಅಲ್ಲ. ಇದು “ಸೇವ್‌ ಮೋದಿ ಗೌರ್ನಮೆಂಟ್‌ ಬಜೆಟ್‌’ ಎಂದು ಹೇಳಿದ್ದಾರೆ.

ಹತ್ತು ವರ್ಷಗಳಿಂದ ಉದ್ಯೋಗ ಸೃಷ್ಟಿಯ ಘೋಷಣೆಯನ್ನು ಮಾತ್ರ ಹೇಳಿ ಯುವಕರನ್ನು ಹತಾಶಗೊಳಿಸಿದ್ದು, ಈ ಬಾರಿಯೂ ಕನಿಷ್ಠ ಘೋಷಣೆ ಮಾಡಲಾಗಿದೆ. ರೈತವರ್ಗ, ದಲಿತರು, ಆದಿವಾಸಿಗಳು, ಹಿಂದುಳಿದ ವರ್ಗ ಸೇರಿದಂತೆ ಸಾಮಾಜಿಕವಾಗಿ ಶೋಷಿತ ವರ್ಗಗಳಿಗಾಗಿ ಯಾವುದೇ ಕ್ರಾಂತಿಕಾರಿ ಯೋಜನೆಯನ್ನು ಘೋಷಿಸಿಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ