Breaking News

ಮೈದುಂಬಿ ಹರಿಯುತ್ತಿರುವ ಮಲಪ್ರಭೆ

Spread the love

ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ.

ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ.

ಮೈದುಂಬಿ ಹರಿಯುತ್ತಿರುವ ಮಲಪ್ರಭೆ

ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ‌.ಹುಬ್ಬಳ್ಳಿ ಬಳಿಯ ನದಿಯಲ್ಲಿ ಅಡ್ಡಲಾಗಿರುವ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದ್ದು, ಪಕ್ಕದಲ್ಲಿರುವ ಹಳೇ ಸೇತುವೆ ಮೇಲ್ಭಾಗಕ್ಕೂ ಮಲಪ್ರಭಾ ನದಿ ನೀರಿನ ಹರಿವು ತಾಗುತ್ತಿದೆ. ಹಳೇ ಸೇತುವೆ ಮುಳುಗಡೆಯಾದರೆ, ನದಿ ಪ್ರವಾಹ ಪಕ್ಕದ ಕೃಷಿ ಜಮೀನುಗಳಿಗೆ ಆವರಿಸಿಕೊಳ್ಳಲಿದೆ. ಎಂ.ಕೆ.ಹುಬ್ಬಳ್ಳಿ ಪಟ್ಟಣದ ಹಾಗೂ ಸುತ್ತಲಿನ ಗ್ರಾಮಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದೆ.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ