Breaking News

ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ರ್‍ಯಾಲಿ. ಮತ್ತೆ ಜೈಲುಪಾಲಾದ

Spread the love

ಮುಂಬೈ: ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರೋಡೆಕೋರನೊಬ್ಬ ಜೈಲಿನಿಂದ ಬಿಡುಗಡೆಗೊಂಡ ಕೆಲವೇ ದಿನದಲ್ಲಿ ಮತ್ತೆ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಅಂದಹಾಗೆ ಈ ದರೋಡೆಕೋರನನ್ನು ಸುಖಾಸುಮ್ಮನೆ ಜೈಲಿಗೆ ಹಾಕಿಲ್ಲ ಇದರ ಹಿಂದೆ ಒಂದು ಕತೆ ಇದೆ.

 

ಮಹಾರಾಷ್ಟ್ರದ ನಾಸಿಕ್‌ ಮೂಲದ ದರೋಡೆಕೋರನಾಗಿರುವ ಹರ್ಷದ್ ಪಾಟಂಕರ್ ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಇದೆ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಇತ್ತ ಜೈಲಿನಿಂದ ಬಿಡುಗಡೆಗೊಳ್ಳುತ್ತಿರುವ ವಿಚಾರ ಆತನ ಬೆಂಬಲಿಗರಿಗೆ ಗೊತ್ತಾಗುತ್ತಿದ್ದಂತೆ ದರೋಡೆಕೋರನನ್ನು ಮೆರವಣಿಗೆ ಮೂಲಕ ಮನೆಗೆ ಕರೆದೊಯ್ಯುವ ಆಲೋಚನೆ ಮಾಡಿದ್ದರು ಅದರಂತೆ ಜುಲೈ 23 ರಂದು ಜೈಲಿನಿಂದ ಹರ್ಷದ್ ಹೊರಬಂದಿದ್ದಾನೆ ಈ ವೇಳೆ ಆತನ ಸಹಚರರು ಬೈಕ್ ಹಾಗೂ ಕಾರಿನ ಮೂಲಕ ಮೆರವಣಿಗೆ ನಡೆಸಿದ್ದಾರೆ

ಅಲ್ಲದೆ ಮೆರವಣಿಗೆ ವೇಳೆ ಸಾರ್ವಜನಿಕರಿಗೂ ತೊಂದರೆಯಾಗಿದೆ ಜೊತೆಗೆ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಹರ್ಷದ್ ವಿರುದ್ಧ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪ, ಜೊತೆಗೆ ಅನುಮತಿ ಪಡೆಯದೆ ರ್‍ಯಾಲಿ ನಡೆಸಿರುವುದು ಸೇರಿದಂತೆ ಅಪಾಯಕಾರಿ ಚಟುವಟಿಕೆಗಳ ತಡೆ ಕಾಯ್ದೆ (ಎಂಪಿಡಿಎ) ಅಡಿಯಲ್ಲಿ ಹರ್ಷದ್ ಪಾಟಂಕರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತ್ತೆ ಬಂಧಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ