Breaking News

ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Spread the love

ರಾಯಬಾಗ: ಸಾಲದ ಬಾಧೆ ತಾಳಲಾರದೆ ತಾಲ್ಲೂಕಿನ ಹೊಸ ದಿಗ್ಗೇವಾಡಿ ಗ್ರಾಮದ ರೈತ ಬಸವರಾಜ ಭೀಮಪ್ಪ ಸಗರೆ (45) ರೈತ ಮರಕ್ಕೆ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇವರಿಗೆ 1 ಎಕರೆ 10ಗುಂಟೆ ಜಮೀನಿದ್ದು, ಸಾಗುವಳಿ ಹಾಗೂ ಅಭಿವೃದ್ಧಿಯ ಸಲುವಾಗಿ ಗ್ರಾಮದ ಮಹಾಲಿಂಗೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ₹1.80 ಲಕ್ಷ, ವಿವಿಧ ಉದ್ದೇಶ ಗ್ರಾಮೀಣ ಕೃಷಿ ಪ್ರಾಥಮಿಕ ಸಂಘದಲ್ಲಿ ₹1 ಲಕ್ಷ, ಡಾ.ಪ್ರಭಾಕರ ಕೋರೆ ಸೌಹಾರ್ದ ಸಹಕಾರಿ ಸಂಘದಲ್ಲಿ₹1.50ಲಕ್ಷ, ಬಾವನ ಸೌಂದತ್ತಿ ಕೆನರಾ ಬ್ಯಾಂಕ್ ಶಾಖೆಯಲ್ಲಿ₹50 ಸಾವಿರ, ಚಿಕ್ಕೋಡಿ ಐಡಿಎಫ್ ಸಿ ಬ್ಯಾಂಕ್‌ನಲ್ಲಿ ₹1.50ಲಕ್ಷ ರೂಪಾಯಿ ಸೇರಿ ಒಟ್ಟು ₹6.30ಸಾವಿರ ಸಾಲ ಮಾಡಿಕೊಂಡಿದ್ದರು.

ಮಳೆ ಕೈಕೊಟ್ಟಿದ್ದರಿಂದ ಬೆಳೆಗಳು ನಾಶವಾಗಿದ್ದವು. ಸಾಲ ಪಾವತಿಸಲು ಆಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ಶೋಭಾ ಸಗರೆ ತಿಳಿಸಿದ್ದಾರೆ


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ