Breaking News

ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕಾಳಮ್ಮವಾಡಿ, ರಾಧಾನಗರಿ, ಮಹಾಬಳೇಶ್ವರ, ಕೊಯ್ನಾ ಮುಂತಾದ ಕಡೆಗೆ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲೂ ಜಿಟಿ ಜಿಟಿ ಮಳೆಯು ಸುರಿಯುತ್ತಲೇ ಇದೆ.

ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ
ಹೀಗಾಗಿ ಉಪ ವಿಭಾಗ ವ್ಯಾಪ್ತಿಯಲ್ಲಿ ಈಗಾಗಲೇ ವೇದಗಂಗಾ ನದಿಯ 4, ದೂಧಗಂಗಾ ನದಿಯ 4, ಕೃಷ್ಣಾ ನದಿಯ 1 ಸೇತುವೆ ಜಲಾವೃತಗೊಂಡಿವೆ. ಗುರುವಾರ ಬೆಳಿಗ್ಗೆ ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿರುವ ಯಕ್ಸಂಬಾ-ದತ್ತವಾಡ ಬೃಹತ್ ಸೇತುವೆ ಮುಳುಗಡೆಯಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಜಲಾವೃತಗೊಂಡ ಸೇತುವೆಗಳ ಸಂಖ್ಯೆ 10ಕ್ಕೆ ಏರಿದಂತಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ