Breaking News

ಘಟಪ್ರಭೆಯಲ್ಲಿ ಹೆಚ್ಚಿದ ನೀರಿನ ಪ್ರಮಾಣ: ದೇವಸ್ಥಾನ, ಮಠ ಜಲಾವೃತ; ಆತಂಕ

Spread the love

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಶುಕ್ರವಾರ ಕೂಡ ಧಾರಾಕಾರ ಮಳೆ ಮುಂದುವರಿಯಿತು. ಇಲ್ಲಿನ ಖಡೇಬಜಾರ್‌ ಮಾರುಕಟ್ಟೆಗೆ ಹೊಂದಿಕೊಂಡ ತೆಂಗಿನಕೇರಿ ಗಲ್ಲಿಯಲ್ಲಿ ನೆಲ ಮಾಳಿಗೆಯ ಮಳಿಗೆಗಳಿಗೆ ಅಪಾರ ಪ್ರಮಾಣ ನೀರು ನುಗ್ಗಿತು. ನಾಲ್ಕು ಅಂಗಡಿಗಳ ವ್ಯಾಪಾರಸ್ಥರು ಪರದಾಡುವಂತಾಯಿತು.

ಘಟಪ್ರಭೆಯಲ್ಲಿ ಹೆಚ್ಚಿದ ನೀರಿನ ಪ್ರಮಾಣ: ದೇವಸ್ಥಾನ, ಮಠ ಜಲಾವೃತ; ಆತಂಕ

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯಲ್ಲಿ 2.16 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕೊಯ್ನಾದಲ್ಲಿ 19.8 ಸೆಂ.ಮೀ., 16.8 ಸೆಂ.ಮೀ., ಕಾಳಮ್ಮವಾಡಿಯಲ್ಲಿ 15 ಸೆಂ.ಮೀ., ಮಹಾಬಳೇಶ್ವರದಲ್ಲಿ 26.7 ಸೆಂ.ಮೀ., ನವಜಾದಲ್ಲಿ 17.2 ಸೆಂ.ಮೀ., ರಾಧಾನಗರಿಯಲ್ಲಿ 23.4 ಸೆಂ.ಮೀ., ಸಾಂಗಲಿಯಲ್ಲಿ 2.6 ಸೆಂ.ಮೀ., ಕೊಲ್ಹಾಪುರದಲ್ಲಿ 10.4 ಸೆಂ.ಮೀನಷ್ಟು ಮಳೆಯಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಚಿಕ್ಕೋಡಿಯಲ್ಲಿ 5.2 ಸೆಂ.ಮೀ. ಮಳೆ ಬಿದ್ದಿದೆ.

105.25 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಕೊಯ್ನಾ ಜಲಾಶಯ ಶುಕ್ರವಾರ 81.20 ಟಿಎಂಸಿ ಅಡಿ ತುಂಬಿದೆ. ಆರು ಗೇಟ್‌ಗಳ ಮೂಲಕ 40 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ರಾಧಾನಗರಿ ಜಲಾಶಯದಿಂದ 10 ಸಾವಿರ ಕ್ಯುಸೆಕ್, ವಾರಣಾ ಜಲಾಶಯದಿಂದ 16 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಘಟಪ್ರಭಾ ನದಿಯಲ್ಲೂ ನೀರಿನ ಪ್ರಮಾಣ ಏರಿದ್ದು ಮೂಡಲಗಿ ತಾಲ್ಲೂಕಿನ ಮಸಗುಪ್ಪಿಯ ಮಹಾಲಕ್ಷ್ಮಿ ದೇವಸ್ಥಾನವು ಶುಕ್ರವಾರ ಜಲಾವೃತಗೊಂಡಿದೆ. ಶುಕ್ರವಾರ ದೇವಿ ವಾರವಾಗಿದ್ದರಿಂದ ಭಕ್ತರು ದೂರ ನಿಂತೇ ಕೈಮುಗಿದರು. ಇದೇ ಗ್ರಾಮದ ಹೊರವಲಯದಲ್ಲಿರುವ ಎಸ್‌ಸಿ ಕಾಲೊನಿಯಲ್ಲಿ ಸಹ ನದಿ ನೀರು ಹೊಕ್ಕಿದ್ದು ಅನೇಕ ಮನೆಗಳು ನೀರಿನಲ್ಲಿ ನಿಂತಿವೆ. ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ