Breaking News

ಕಾಗವಾಡ | ಪ್ರವಾಹ: ಐದು ಪ್ರಮುಖ ರಸ್ತೆಗಳು ಮುಳುಗಡೆ

Spread the love

ಕಾಗವಾಡ: ತಾಲ್ಲೂಕಿನ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗುತ್ತಿದ್ದು, ಪ್ರಮುಖ ಐದು ರಸ್ತೆಗಳ ಮೇಲೆ ನದಿಯ ನೀರು ಹರಿಯುತ್ತಿದ್ದರಿಂದ ಸಂಚಾರ ಬಂದ್‌ ಮಾಡಲಾಗಿದೆ.

ತಾಲ್ಲೂಕಿನ ಅಥಣಿ-ಕಾತ್ರಾಳ, ಉಗಾರ ಬಿ.ಕೆ. ಕುಸುನಾಳ, ಉಗಾರ ಬಿ.ಕೆ- ಶಿರಗುಪ್ಪಿ,ಕಾತ್ರಾಳ-ಬಣಜವಾಡ, ಮೋಳವಾಡ-ಇಂಗಳಿ ರಸ್ತೆಗಳು ಜಲಾವೃತ ಆಗಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಕಾಗವಾಡ ಪಿಎಸ್‌ಐ ಎಂ.ಬಿ. ಬಿರಾದಾರ ಬ್ಯಾರಿಕೇಡ್ ಗಳನ್ನು ಅಳವಡಿಸಿ ಸಿಬ್ಬಂದಿ ನಿಯೋಜಿಸಿ ಸಂಚಾರ ಬಂದ್‌ ಮಾಡಿದ್ದಾರೆ.

ಕಾಗವಾಡ | ಪ್ರವಾಹ: ಐದು ಪ್ರಮುಖ ರಸ್ತೆಗಳು ಮುಳುಗಡೆ

ತಾಲ್ಲೂಕಿನ ನದಿ ತೀರದ ಗ್ರಾಮಗಳಾದ ಕಾತ್ರಾಳ, ಐನಾಪುರ, ಕೃಷಾ ಕಿತ್ತೂರು, ಬಣಜವಾಡ, ಜೂಗುಳ, ಉಗಾರ, ಮೊಳವಾಡ, ಕುಸುನಾಳ, ಗ್ರಾಮಗಳ ಸಾವಿರಾರು ರೈತರು ಬೆಳದ ಸಾವಿರಾರು ಎಕರೆ ಬೆಳೆ ನದಿ ನೀರಿನಿಂದ ಜಲಾವೃತವಾಗಿವೆ. ತೋಟದ ವಸತಿ ಜನರು ತಮ್ಮ ಸಾಮಾನು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.ಕೃಷ್ಣಾ ನದಿಯ ನೀರು ಹೆಚ್ಚಳವಾದರೆ ಇನ್ನು ಅನೇಕ ರಸ್ತೆಗಳು, ಗ್ರಾಮಗಳು ಮುಳುಗುವ ಆಂತಕ ನದಿ ತೀರದ ಜನರಲ್ಲಿ‌ ಉಂಟಾಗಿದೆ.


Spread the love

About Laxminews 24x7

Check Also

ಬೆಳಗಾವಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ

Spread the loveಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ