Breaking News

ಮುಂಬೈನಲ್ಲಿ ಮಹಿಳೆಯನ್ನು ಕೊಂದು ಸಿಕ್ಕಿಬಿದ್ದ ಕಲಬುರಗಿ ಮೂಲದ ದಾವೂದ್‌ ಶೇಖ್‌

Spread the love

ಥಾಣೆ, ಜು 30 (ಪಿಟಿಐ) : ನವಿ ಮುಂಬೈನ ಉರಾನ್‌ ರೈಲು ನಿಲ್ದಾಣದ ಬಳಿ 20 ವರ್ಷದ ಮಹಿಳೆಯ ಶವ ಪತ್ತೆಯಾದ ಎರಡು ದಿನಗಳ ನಂತರ, ಆಕೆಯನ್ನು ಕೊಂದ ಆರೋಪದ ಮೇಲೆ ಕರ್ನಾಟಕ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಆರೋಪಿ ದಾವೂದ್‌ ಶೇಖ್‌ ನನ್ನು ಕರ್ನಾಟಕದ ಗುಲ್ಬರ್ಗಾದ ಶಹಾಪುರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಉಪ ಪೊಲೀಸ್‌‍ ಆಯುಕ್ತರು ತಿಳಿಸಿದ್ದಾರೆ. ಶನಿವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮಹಿಳೆಯ ಶವ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿತ್ತು. ಪೊಲೀಸರ ಪ್ರಕಾರ, ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ ಶುಕ್ರವಾರ ಅರ್ಧ ದಿನ ರಜೆ ತೆಗೆದುಕೊಂಡಿದ್ದರು.

ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌‍) ಸೆಕ್ಷನ್‌ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಮೂರು ತಂಡಗಳನ್ನು ರಚಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಕ್ರೈಂ ಬ್ರಾಂಚ್‌ ಕೂಡ ಸ್ವತಂತ್ರವಾಗಿ ಪ್ರಕರಣದ ತನಿಖೆ ನಡೆಸಿದೆ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ