Breaking News

ಕೃಷ್ಣಾ ನದಿ ನೀರಿನ‌ ಮಟ್ಟ ಹೆಚ್ಚಳ

Spread the love

ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗಿದೆ. ಈಗಾಗಲೇ ಜಿಲ್ಲೆಯ 35 ಕ್ಕೂ ಅಧಿಕ ಸೇತುವೆಗಳು ಜಲಾವೃತಗೊಂಡಿದ್ದು ಕೃಷ್ಣಾ ನದಿ ಪಾತ್ರದ ಸುಮಾರು 60 ಕ್ಕೂ ಅಧಿಕ ಗ್ರಾಮಗಳಿಗೆ ನೀರು ಆವರಿಸಿದೆ. ನದಿ ಪಾತ್ರದ ಮನೆಗಳು ನೀರಿನಲ್ಲಿ ಮುಳುಗಡೆಯಾಗಿವೆ.

ಕೃಷ್ಣಾ ನದಿ‌ ನೀರಿನ ಮಟ್ಟದಲ್ಲಿ ಏರಿಕೆ ಖಂಡಿದ್ದು ಜನರಲ್ಲಿ ಆತಂಕ ಮನೆಮಾಡಿದೆ. ಸಧ್ಯ ಮಳೆ ಆರ್ಭಟ ಕಡಿಮೆಯಾದರು ಪ್ರವಾಹದಲ್ಲಿ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ನದಿ ಪಾತ್ರದ ಜನ ಭಯದಲ್ಲೇ ಜೀವನ‌ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

ಮಹಾರಾಷ್ಟ್ರದಲ್ಲಿ ಸುರಿದ ಧಾರಾಕಾರ ಮಳೆಗೆ ಉಂಟಾಗಿರುವ ಕೃಷ್ಣಾ ನದಿ ಪ್ರವಾಹ ತಗ್ಗುವ ಲಕ್ಷಣ ಕಂಡುಬರುತ್ತಿಲ್ಲ. ನದಿ ಪಾತ್ರದಲ್ಲಿನ ಸುಮಾರು 60ಕ್ಕೂ ಅಧಿಕ ಗ್ರಾಮಗಳು ಜಲಾವೃತಗೊಂಡಿದ್ದು 400 ಕ್ಕೂ ಅಧಿಕ ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಸರೆ ಪಡೆಯುತ್ತಿವೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ತ್ಯಾಜ್ಯ ಬಿಸಾಡಿದರೆ ಬೀಳುತ್ತೆ ದಂಡ

Spread the loveಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆಯ ಕುಮಾರಧಾರ ನದಿಯ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಪೊಲೀಸ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ