Breaking News

ಘಟಪ್ರಭಾ ನದಿ ಪ್ರವಾಹ: ಮರೀಚಿಕೆಯಾದ ಶಾಶ್ವತ ಸ್ಥಳಾಂತರ

Spread the love

ಹಾಲಿಂಗಪುರ: ಘಟಪ್ರಭಾ ನದಿ ಪ್ರವಾಹದಿಂದ ನಡುಗಡ್ಡೆಯಾಗಿರುವ ಹಳೆ ನಂದಗಾಂವ ಗ್ರಾಮದ 52 ಕುಟುಂಬಗಳ ಶಾಶ್ವತ ಸ್ಥಳಾಂತರದ ಬೇಡಿಕೆ ಮರೀಚಿಕೆಯಾಗಿದ್ದು, ಮನೆಗಳ ಹಂಚಿಕೆ ಗೊಂದಲಮಯವಾಗಿ ಪರಿಣಮಿಸಿದೆ.

ಗ್ರಾಮಸ್ಥರ ಶಾಶ್ವತ ಸ್ಥಳಾಂತರಕ್ಕಾಗಿ 1982ರಲ್ಲಿಯೇ ಹಕ್ಕು ಪತ್ರ ಹಾಗೂ 10 ಎಕರೆ ಭೂಮಿ ನೀಡಲಾಗಿದೆ.

ಪ್ರತಿ ಮನೆಯ ಕುಟುಂಬ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಜಾಗೆ ಅಳತೆ ಮಾಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯ್ತಿ ಪ್ರತಿ ವರ್ಷ ಇದಕ್ಕಾಗಿ ಭೂಬಾಡಿಗೆಯನ್ನು ಕೆಲ ಗ್ರಾಮಸ್ಥರಿಂದ ಪಡೆಯುತ್ತಿದೆ. ಸ್ಥಳಾಂತರಕ್ಕಾಗಿ ಹಕ್ಕು ಪತ್ರ ನೀಡಲಾಗಿದ್ದರೂ ಮನೆ ಯಾರಿಗೆ ಸೇರಬೇಕು ಎಂದು ಇಲ್ಲಿಯವರೆಗೂ ನಮೂದಿಸಿಲ್ಲ ಎಂಬ ವಿಚಾರ ಗ್ರಾಮಸ್ಥರಿಗೆ ಗೊಂದಲಕರವಾಗಿದೆ.


Spread the love

About Laxminews 24x7

Check Also

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರಾಜೀನಾಮೆ

Spread the loveಮುಂಬೈ: ಅತ್ಯಾಚಾರ ಆರೋಪಿ ಹಾಗೂ ಖ್ಯಾತ ಜ್ಯೋತಿಷಿ ಅಶೋಕ್‌ ಖಾರಟ್ ಜತೆಗಿನ ಫೋಟೋಗಳು ಬಹಿರಂಗವಾದ ಹಿನ್ನೆಲೆಯಲ್ಲಿ, ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ