Breaking News

ಅವಳಿ ಜಲಾಶಯಗಳಿಗೆ ಬಾಗಿನ ಸಮರ್ಪಣೆ

Spread the love

ಹೊಸನಗರ: ನಾಡಿನ ಬೆಳಕಿಗಾಗಿ ಬಹುದೊಡ್ಡ ಕೊಡುಗೆ ನೀಡಿದ ಚಕ್ರಾ-ಸಾವೇಹಕ್ಲು ಅವಳಿ ಜಲಾಶಯಗಳು ಗಮನಾರ್ಹ ಅಭಿವೃದ್ಧಿ ಕಾಣಬೇಕಾಗಿದೆ. ಈ ಪ್ರದೇಶವು ‘ಇಕೋ ಟೂರಿಸಂ’ಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬುಧವಾರ ಚಕ್ರಾ ಮತ್ತು ಸಾವೇಹಕ್ಲು ಅವಳಿ ಜಲಾಶಯಗಳಿಗೆ ಪ್ರಥಮ ಬಾರಿಗೆ ಬಾಗಿನ ಸಮರ್ಪಿಸಿದ ಬಳಿಕ ಮಾತನಾಡಿದರು.

ಅವಳಿ ಜಲಾಶಯಗಳಿಗೆ ಬಾಗಿನ ಸಮರ್ಪಣೆ

ಈ ಅವಳಿ ಜಲಾಶಯ ಪ್ರದೇಶಗಳು ಪ್ರವಾಸೋದ್ಯಮಕ್ಕೆ ಸೂಕ್ತ ಜಾಗ. ಜನರು ಇಲ್ಲಿನ ಸೌಂದರ್ಯವನ್ನು ಆಸ್ವಾದಿಸಲು ಅವಕಾಶ ಮಾಡಿಕೊಡಬೇಕಿದೆ. ಅದರಲ್ಲೂ ನೀರು ತುಂಬಿರುವ ಸಂದರ್ಭದಲ್ಲಿ ಈ ಪ್ರದೇಶ ಎಲ್ಲರ ಕಣ್ಮನ ಸೆಳೆಯುತ್ತದೆ. ಇದರ ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಕೂಡ ಅಗತ್ಯವಾಗಿದೆ ಎಂದರು.

ಈ ಜಲಾಶಯಕ್ಕೆ ಹೋಗಲು ಮಾಸ್ತಿಕಟ್ಟೆಯಿಂದ ಪಾಸ್ ತರಬೇಕಿದೆ. ಸ್ಥಳೀಯವಾಗಿಯೇ ಪಾಸ್ ನೀಡಿದರೆ ಜನರಿಗೆ ಅನುಕೂಲವಾಗುತ್ತದೆ. ಕರಿಮನೆ ಗ್ರಾಮ ಪಂಚಾಯಿತಿಯಲ್ಲಿ ಪಾಸ್ ಕೊಡುವ ವ್ಯವಸ್ಥೆ ಮಾಡುವ ಸಂಬಂಧ ಕೆಪಿಸಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದರು.

ಶಾಪವೂ ಹೌದು ವರವೂ ಹೌದು: ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ‘ಇಲ್ಲಿನ ಜಲಾನಯನ ಪ್ರದೇಶ ಅದ್ಭುತವಾಗಿದೆ. ಎಲ್ಲೆಲ್ಲೂ ನೀರು ಕಾಣುತ್ತಿದೆ. ಮಲೆನಾಡಿಗೆ ಈ ನೀರು ಶಾಪವೂ ಹೌದು. ಆದರೆ ದೇಶದ ಪ್ರಾಕೃತಿಕ ಸಂಪನ್ಮೂಲದ ದೃಷ್ಟಿಯಿಂದ ವರವೂ ಹೌದು. ಪ್ರವಾಸೋದ್ಯಮದ ಜೊತೆಗೆ ಉದ್ಯೋಗ ಸೃಷ್ಟಿ ಆಗುವಂತ ಯೋಜನೆಗಳು ರೂಪಿಸಬೇಕಾಗಿದೆ’ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ