Breaking News

ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನ ಮಾಡಿ: ಸಚಿವ ದಿನೇಶ್‌ ಗುಂಡೂರಾವ್‌

Spread the love

ಬೆಳಗಾವಿ: ‘ಯಾವ ಧರ್ಮವೂ ಅಂಗಾಂಗ ದಾನ ನಿಷೇಧಿಸಿಲ್ಲ. ಈ ಪದ್ಧತಿ ಅನುಸರಿಸಿದರೆ ಬದುಕಿನಲ್ಲಿ ಮೋಕ್ಷ ಸಿಗದು, ನಿಧನದ ನಂತರ ಸ್ವರ್ಗಕ್ಕೆ ಹೋಗಲಾಗದು ಎಂಬೆಲ್ಲ ತಪ್ಪು ಕಲ್ಪನೆ ಜನರಲ್ಲಿವೆ. ಇದರಿಂದ ಎಲ್ಲರೂ ಹೊರಬಂದು ಅಂಗಾಂಗ ದಾನಕ್ಕೆ ಮುಂದಾಗಬೇಕು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನ ಮಾಡಿ: ಸಚಿವ ದಿನೇಶ್‌ ಗುಂಡೂರಾವ್‌

ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ಆಯಂಡ್‌ ರಿಸರ್ಚ್‌ನ (ಕಾಹೇರ್‌) ಡಾ.ಬಿ.ಎಸ್‌.ಜೀರಗೆ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಆಯೋಜಿಸಿದ್ದ ಭಾರತೀಯ ಅಂಗಾಂಗ ದಾನ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಕಸಿ ಮಾಡಲು ಇಂದು ಅಂಗಾಂಗಗಳ ಅಗತ್ಯವಿದೆ. ಅಂಗಾಂಗ ದಾನದ ವಿಷಯದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಆದರೆ, ಕಸಿಗಾಗಿ ಕಾಯುತ್ತಿರುವವರ ಬೇಡಿಕೆಯಂತೆ ಅಂಗಾಂಗ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಂಗಾಂಗ ದಾನ ಪ್ರಕ್ರಿಯೆ ಆಂದೋಲನ ರೂಪದಲ್ಲಿ ನಡೆಯಬೇಕಿದೆ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ