Breaking News

ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ

Spread the love

ಕೃಷ್ಣಾ ನದಿಯಲ್ಲಿ ವ್ಯಕ್ತಿ ಶವ ಪತ್ತೆ

ಬೆಳಗಾವಿ: ತಾಲ್ಲೂಕಿನ ಬಾವನ ಸವದತ್ತಿ ಗ್ರಾಮದ ಬಾಬುರಾವ್‌ ಸಂಜೀವ ಬಾಪಕರ (40) ಎಂಬ ವ್ಯಕ್ತಿ ಶವ, ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಶನಿವಾರ ಪತ್ತೆಯಾಗಿದೆ.

ಬಾಬುರಾವ್‌ ಅವರು ಕಾಗವಾಡ ಸಕ್ಕರೆ ಕಾರ್ಖಾನೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.

ಗುರುವಾರ ಬೆಳಿಗ್ಗೆ ಮನೆಯಿಂದ ಹೋದವರು ಮತ್ತೆ ಬಂದಿರಲಿಲ್ಲ. ಅಂಕಲಿ ಸೇತುವೆ ಬಳಿ ಅವರ ಶವ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಅಂಕಲಿ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ