Breaking News

ಮಳೆಗಾಲದಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಶಾಲಾ ಮಕ್ಕಳ ಪಯಣ

Spread the love

ಕಿತ್ತೂರು: ಎರಡು ಲಾರಿ ಟ್ಯೂಬ್ ಗಳಿಗೆ ಗಾಳಿ ತುಂಬಿಸಿ ಅದರ ಮೇಲೆ ಕಟ್ಟಿಗೆಯಿಟ್ಟು, ಎರಡೂ ದಂಡೆಗೆ ನೆಡಲಾಗಿರುವ ಗೂಟಗಳಿಗೆ ಹಗ್ಗ ಕಟ್ಟಿ ಮಾಡಿರುವ ‘ಜಗ್ಗುವ ಟ್ಯೂಬ್ ತೆಪ್ಪ’ದಲ್ಲಿ ತಾಲ್ಲೂಕಿನ ಕುಲವಳ್ಳಿಯ ನಿಂಗಾಪುರ ಗ್ರಾಮಸ್ಥರು, ಶಾಲಾ ಮಕ್ಕಳು, ಮಹಿಳೆಯರು, ರೈತರಿಗೆ ಇದೇ ಸಂಚಾರದ ಜಲಮಾರ್ಗವಾಗಿದೆ.

ನಿಂಗಾಪುರ: ಮಳೆಗಾಲದಲ್ಲಿ 'ಟ್ಯೂಬ್ ತೆಪ್ಪ'ದಲ್ಲೇ ಪಯಣ

‘ಧಾರವಾಡ ತಾಲ್ಲೂಕಿನ ಅಳ್ನಾವರ ಬಳಿಯ ಹುಲಿಕೆರೆ ಭರ್ತಿಯಾದರೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ನಿಂಗಾಪುರಕ್ಕೆ ಈ ಅಪಾಯಕಾರಿ ನೀರ ಮೇಲಿನ ಸಂಚಾರ ತಪ್ಪಿದ್ದಲ್ಲ’ ಎನ್ನುತ್ತಾರೆ ಗ್ರಾಮಸ್ಥರು.

‘ಅಲ್ಲದೇ, ನಾವು ಕೃಷಿ ಮಾಡಿರುವ ಜಮೀನುಗಳು ಮುಳುಗುತ್ತವೆ. ಸಂಚಾರ ಸ್ಥಗಿತಗೊಳ್ಳುತ್ತದೆ. ಹೀಗಾಗಿ ಪರ್ಯಾಯ ಮಾರ್ಗವನ್ನು ನಾವೇ ಕಂಡುಕೊಂಡಿದ್ದೇವೆ’ ಎನ್ನುತ್ತಾರೆ.

‘ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ನೀರು ಇಳಿದ ಬಳಿಕ ಅವರು ಗಮನ ಹರಿಸುವುದಿಲ್ಲ. ಮಳೆಗಾಲದಲ್ಲಿ ಗಮನಕ್ಕೆ ತರಲಾದ ಸಂಚಾರ ಸಮಸ್ಯೆಯ ನೋವು ಮತ್ತೆ ಮಳೆಗಾಲದಲ್ಲಿಯೇ ಮುಂದುವರಿಯುತ್ತದೆ. ಎರಡು ದಶಕದಿಂದ ಈ ಸಮಸ್ಯೆ ಹಾಗೇ ಮುಂದುವರಿದಿದೆ. ಏನೂ ಕ್ರಮವಾಗಿಲ್ಲ’ ಎಂದು ಈರಯ್ಯ ನಿಂಗಾಪುರಮಠ ಬೇಸರಿಸಿದರು.

‘ಹಿನ್ನೀರಿನ ಪಶ್ಚಿಮ ದಿಕ್ಕಿನಲ್ಲಿ ಕೆಲವರ ಜಮೀನುಗಳಿವೆ. ಹತ್ತಾರು ಕುಟುಂಬಗಳು ಅಲ್ಲಿ ವಾಸವಾಗಿವೆ. ಅಲ್ಲಿಂದ ಮಕ್ಕಳು ಈ ಕಡೆಗೆ ಶಾಲೆ ಕಲಿಯಲು ಬರಬೇಕು. ಪೂರ್ವ ದಿಕ್ಕಿನಲ್ಲಿರುವ ರೈತ ಕುಟುಂಬಗಳು ಆ ದಂಡೆಗಿರುವ ಜಮೀನುಗಳಿಗೆ ದನ,ಕರುಗಳನ್ನು ಹೊಡೆದುಕೊಂಡು ಹೋಗಬೇಕು. ದನಗಳು ನೀರಿನಲ್ಲಿ ಈಜು ಬಿದ್ದು ಆ ದಂಡೆ ಸೇರುತ್ತವೆ. ಜನ, ಮಕ್ಕಳು ಟ್ಯೂಬ್ ತೆಪ್ಪದಲ್ಲಿ ಒಂದು ದಂಡೆಯಿಂದ ಮತ್ತೊಂದು ದಂಡೆಗೆ ಸಂಚರಿಸುತ್ತಾರೆ’ ಎಂದು ಕುಲವಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ದಶರಥ ಮಡಿವಾಳರ ಪರಿಸ್ಥಿತಿಯನ್ನು ವಿವರಿಸಿದರು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ