Breaking News

ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

Spread the love

ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ.

ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.

 

ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ‌ಇನ್ನೂ ಭಯಂಕರ ಇದೆ. ಹೇಗೋ ಬಚಾವ್ ಆಗಿ ಗಲಭೆ ಪೀಡಿತ ದೇಶದಿಂದ ಬಂದಿದ್ದೇವೆ.‌ ಈ ಸಂದರ್ಭದಲ್ಲಿ ನಾವು ಬಾಂಗ್ಲಾದಲ್ಲಿಯೇ ಇದ್ದಿದ್ದರೆ ಕೊಠಡಿಯಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದರು ಎಂದು ಬಾಂಗ್ಲಾದಲ್ಲಿನ ಹಿಂಸಾಚಾರದ ಭಯಾನಕ ಘಟನೆಯನ್ನು ನೇಹಲ್ ನೆನಪಿಸಿಕೊಂಡರು.


Spread the love

About Laxminews 24x7

Check Also

ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ

Spread the loveಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ‌ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ