Breaking News

ಜಮೀನಿಗೆ ಹಾನಿ: ಎಂಜಿನಿಯರ್‌ ಪರಿಶೀಲನೆ

Spread the love

ಹಿರೇಬಾಗೇವಾಡಿ: ಇಲ್ಲಿನ ಮಲ್ಲಪ್ಪನಗುಡ್ಡದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕಟ್ಟಡಗಳು ನಿರ್ಮಾಣಗೊಳ್ಳುತ್ತಿರುವ ಸ್ಥಳಕ್ಕೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಹಾಯಕ ಎಂಜಿನಿಯರ್‌ ಅರುಣ ಕುಮಾರ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು.

ಕಟ್ಟಡ ಕಾಮಗಾರಿಯಿಂದ ಜಮೀನುಗಳಿಗೆ ನೀರು ನುಗ್ಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ರೈತರು ಈಚೆಗೆ ಕುಲಪತಿಗೆ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅರುಣ ಕುಮಾರ ಅವರು, ರಸ್ತೆ ನಿರ್ಮಾಣ, ಅಂತರ್ಜಲ, ಜಮೀನುಗಳಿಗೆ ಉಂಟಾಗುವ ಹಾನಿ ತಡೆ ಕುರಿತು ಚರ್ಚಿಸಿದರು. ತಮ್ಮ ಕಾರ್ಯವ್ಯಾಪ್ತಿಯ ಕೆಲಸಗಳನ್ನು ಮಾಡುವುದಾಗಿ ಮತ್ತು ಹೆಚ್ಚುವರಿ ಕೆಲಸಗಳ ಬಗ್ಗೆ ಕುಲಪತಿ ಜೊತೆಗೆ ಚರ್ಚಿಸುವುದಾಗಿ ರೈತರಿಗೆ ತಿಳಿಸಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ