Breaking News

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ ಯಾದಗಿರಿ ಮೂಲದಕಾರ್ಮಿಕ ಸಾವು

Spread the love

ಬೆಂಗಳೂರು, ಆಗಸ್ಟ್​ 10: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು (Centering collapsed) ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು (28), ಆಸ್ಪತ್ರೆಗೆ ಸಾಗಿಸುವಾಗ ಪ್ರಕಾಶ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು: ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿತ: ಮೂವರ ಪೈಕಿ ಇಬ್ಬರು ಕಾರ್ಮಿಕರು ಸಾವು

ಸೆಂಟ್ರಿಂಗ್ ಹಾಕಿ ಆರ್​.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಐದನೇ ಅಂತಸ್ತಿನಲ್ಲಿ ಕಟ್ಟಡ‌ ಕಾಮಗಾರಿ ಕೆಲಸ ನಡೆಯುತಿತ್ತು. ಈ ಸಂದರ್ಭದಲ್ಲಿ ನಿರ್ಮಾಣ ಮಾಡುತ್ತಿದ್ದ ಸೆಂಟ್ರಿಂಗ್ ಕುಸಿದಿದೆ. ಐದನೇ ಮಹಡಿಯಿಂದ ಕಾರ್ಮಿಕ ಹಿಮಾಂಶು ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕ ಯಾದಗಿರಿ ಮೂಲದವನು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ