Breaking News

ತುಂಗಭದ್ರಾ ಜಲಾಶಯದಲ್ಲಿ ಲೋಪ: ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: C.M.

Spread the love

ಕೊಪ್ಪಳ: ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ.

ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತುಂಗಭದ್ರಾ ಜಲಾಶಯದಲ್ಲಿ ಲೋಪ: ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: ಸಿದ್ದರಾಮಯ್ಯ

ತಾಲ್ಲೂಕಿನ ಬಸಾಪುರ ಬಳಿ ಏರ್ ಸ್ಟ್ರೀಪ್ ನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕದವದರು ಕೂಡ ಮಂಡಳಿಯಲಿ ಇರುತ್ತಾರೆ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಾರೆ. ತುಂಗಭದ್ರಾ ಜಲಾಶಯದ 19ನೇ ಗೇಟಿನ ಚೈನ್ ಕಟ್ ಆಗಿ, ನೀರು ಹೋಗುತ್ತಿದೆ. ರಾಜ್ಯ ಸರ್ಕಾರದ ಹೊಣಗೇಡಿತನ ಎಂದರೆ ಏನು ಅರ್ಥ. ಅನುದಾನ ನೀಡುತ್ತೇವೆ ಅಷ್ಟೇ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.

ಜಲಾಶಯದಲ್ಲಿ 105 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಅದರಲ್ಲಿ 60 ಟಿಎಂಸಿ ಅಡಿ ನೀರು ಬಿಡಬೇಕು. ರೈತರಿಗೆ ವ್ಯವಸಾಯಕ್ಕೆ ತೊಂದರೆ ಆಗುವುದಿಲ್ಲ. ಇನ್ನೂ ಮಳೆಗಾಲ ಇದ್ದು, ಜಲಾಶಯ ತುಂಬುವ ಭರವಸೆ ಇದೆ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ