Breaking News

ಕೊಲೆ ಪ್ರಕರಣ: ಎರಡು ವಿಶೇಷ ತಂಡ ರಚನೆ

Spread the love

ಬೆಳಗಾವಿ: ತಾಲ್ಲೂಕಿನ ಕರ್ಲೆ ಬಳಿ ವ್ಯಕ್ತಿಯೊಬ್ಬರ ಕೊಲೆ ಮಾಡಿದ ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡ ರಚಿಸಲಾಗಿದೆ.

ಕರ್ಲೆ-ಬಾದರವಾಡಿ ರಸ್ತೆಯಲ್ಲಿ ಸೋಮವಾರ ಹೊರಟಿದ್ದ ಮೋಹನ ತಳವಾರ(55) ಅವರನ್ನು ದುಷ್ಕರ್ಮಿಗಳು ತಡೆದು, ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ಮಾಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

‘ಮೋಹನ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಎರಡು ವಿಶೇಷ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಸುದ್ದಿಗಾರರಿಗೆ ತಿಳಿಸಿದರು.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ