Breaking News

ಮಳೆಗೆ ಕೊಚ್ಚಿಹೋದ ಬಿ.ಯದ್ಲಾಪುರು ರಸ್ತೆ

Spread the love

ರಾಯಚೂರು: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ.

ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.

 

ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ ಹೋಗುವುದರಿಂದ ರಸ್ತೆ ಕಿತ್ತು ಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಈಚೆಗೆ ಮಳೆ ಅಬ್ಬರಿಸಿದ ಸಂದರ್ಭದಲ್ಲೇ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿಪತ್ರ ಕೊಟ್ಟು ದುರಸ್ತಿ ಮಾಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದೇವೆ. ‘ಇದೀಗ ಬುಧವಾರ ರಾತ್ರಿ ಸುರಿದ ಮಳೆಗೆ ರಸ್ತೆ ಮತ್ತಷ್ಟು ಹಾಳಾಗಿದೆ’ ಎಂದು ಗ್ರಾಮದ ನಿವಾಸಿ ವೀರ ಪ್ರತಾಪ ರೆಡ್ಡಿ ತಿಳಿಸಿದ್ದಾರೆ.

ದೇವದುರ್ಗ, ಕವಿತಾಳ, ಮಾನ್ವಿ, ಲಿಂಗಸುಗೂರು, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ