Breaking News

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ- ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ ಮಟ್ಟ ಸೋಮವಾರ ದಿಢೀರ್‌ ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ