Breaking News

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ

Spread the love

ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ

ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ.

ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ.

ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ ಹರಿವು ಹೆಚ್ಚಿರುವ ಕಾರಣ ಮಲಪ್ರಭಾ ನದಿಗೆ 10 ಸಾವಿರ ಕ್ಯುಸೆಕ್‌ ನೀರು ಬಿಡುವುದಾಗಿ ಅಣೆಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ