Breaking News

ದರ್ಶನ್ ಆಂಡ್ ಗ್ಯಾಂಗ್’ ನ್ಯಾಯಾಂಗ ಅವಧಿ ಮತ್ತೆ ವಿಸ್ತರಣೆ

Spread the love

ಬೆಂಗಳೂರು, ಆಗಸ್ಟ್ 28: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್‌ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಬುಧವಾರಕ್ಕೆ ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು.

 

ನಟ ದರ್ಶನ್ ಪ್ರಕರಣದಲ್ಲಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಅವಧಿಯನ್ನು ಸೆಪ್ಟೆಂಬರ್‌ 9ರವರೆಗೆ ವಿಸ್ತರಿಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ಡೆವಿಲ್ ‘ದರ್ಶನ್ ಆಂಡ್ ಗ್ಯಾಂಗ್’ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣ ಕುರಿತು ಬುಧವಾರ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರಾದ ಎಸ್‌ ನಿರ್ಮಲಾ ಅವರಿದ್ದ ನ್ಯಾಯಪೀಠವು ಮತ್ತೆ 12 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ